2 ಲಕ್ಷಕ್ಕೂ ಹೆಚ್ಚು ಅನರ್ಹ ಬಿಪಿಎಲ್ ಕಾರ್ಡ್ಗಳು ರದ್ದು: ಎಪಿಎಲ್ಗೆ ಪರಿವರ್ತನೆ, 4.80 ಲಕ್ಷ ಅನರ್ಹ ಫಲಾನುಭವಿಗಳು ಔಟ್!
ಕಡ್ಡಾಯ ಇ-ಕೆವೈಸಿ, ಅನರ್ಹರಿಗೆ ದಂಡದ ಎಚ್ಚರಿಕೆ: ಅರ್ಹರಿಗೆ ಕಾರ್ಡ್ ಮರುಪಡೆಯಲು 45 ದಿನಗಳ ಅವಕಾಶ ಕರ್ನಾಟಕ ರಾಜ್ಯದಲ್ಲಿ ಪಡಿತರ ಸೋರಿಕೆ ಮತ್ತು ನಕಲಿ ಕಾರ್ಡ್ ಹಾವಳಿಗೆ ಕಡಿವಾಣ ಹಾಕಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಕಠಿಣ ಕ್ರಮಕ್ಕೆ ಮುಂದಾಗಿದೆ. ಅರ್ಹತಾ ಮಾನದಂಡಗಳನ್ನು ಉಲ್ಲಂಘಿಸಿ ಪಡೆದಿದ್ದ ಎರಡು ಲಕ್ಷಕ್ಕೂ ಅಧಿಕ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಪಡಿಸಿ ಎಪಿಎಲ್ ಕಾರ್ಡ್ಗಳಾಗಿ ಪರಿವರ್ತಿಸಲಾಗಿದೆ. ಈ ಮೂಲಕ ಸುಮಾರು 4.80 ಲಕ್ಷ ಅನರ್ಹ ಫಲಾನುಭವಿಗಳನ್ನು ಸರ್ಕಾರದ ಪಟ್ಟಿಯಿಂದ ಕೈಬಿಡಲಾಗಿದೆ. ಅನರ್ಹತಾ ಮಾನದಂಡಗಳು:…
ತುಮಕೂರು ಲೋಕಾಯುಕ್ತದಿಂದ ಬಿಗ್ ಶಾಕ್: ತೋವಿನಕೆರೆ ಗ್ರಾ.ಪಂ. ಬಿಲ್ ಕಲೆಕ್ಟರ್ ಮತ್ತು ಕಾರ್ಯದರ್ಶಿ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸೆರೆ
ತುಮಕೂರು ಟ್ರ್ಯಾಪ್ ಆಪರೇಷನ್; ಲಂಚ ಸ್ವೀಕರಿಸುತ್ತಿದ್ದ ತೋವಿನಕೆರೆ ಗ್ರಾ.ಪಂ. ಬಿಲ್ ಕಲೆಕ್ಟರ್ ಮಾರುತಿ, ಕಾರ್ಯದರ್ಶಿ ಸುಮಾ ಲೋಕಾಯುಕ್ತ ಬಲೆಗೆ
ಕೊರಟಗೆರೆ ತಾಲ್ಲೂಕಿನ ತೋವಿನಕೆರೆ ಗ್ರಾಮ ಪಂಚಾಯಿತಿಯಲ್ಲಿ ಖಾತೆ ಬದಲಾವಣೆಗೆ ₹ 8,000 ಲಂಚ ಪಡೆಯುತ್ತಿದ್ದ ಬಿಲ್ ಕಲೆಕ್ಟರ್ ಮಾರುತಿ ಹಾಗೂ ಕಾರ್ಯದರ್ಶಿ ಸುಮಾ ಅವರನ್ನು ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ಮಾಡಿ ಬಂಧಿಸಿದ್ದಾರೆ. ಸಂಪೂರ್ಣ ಮಾಹಿತಿ ಇಲ್ಲಿದೆ.
ರಾತ್ರಿ ಸರಿಯಾಗಿ ನಿದ್ದೆ ಬರದೆ ಒದ್ದಾಡುತ್ತೀರಾ? ಹಾಗಿದ್ರೆ ಈ ಸ್ಟೋರಿ ಓದಿ
ಇತ್ತೀಚಿನ ದಿನಗಳಲ್ಲಿ ಜೀವನಶೈಲಿಯಲ್ಲಿ ಮಾಡಿಕೊಂಡಂತಹ ಬದಲಾವಣೆಗಳಿಂದಾಗಿ ಆರೋಗ್ಯ (Health) ಸಮಸ್ಯೆಗಳು ಹೆಚ್ಚಾಗುತ್ತಿದೆ. ಸರಿಯಾದ ಆಹಾರ ಪದ್ಧತಿಯನ್ನು ಅನುಸರಿಸದಿರುವುದು ಅಥವಾ ಹೆಚ್ಚಿದ ಒತ್ತಡ ಈ ರೀತಿ ನಾನಾ ಕಾರಣಗಳಿಂದ ಒಂದಿಲ್ಲೊಂದು ರೀತಿಯಲ್ಲಿ ಆರೋಗ್ಯ ಹದಗೆಟ್ಟಿದೆ. ಮಾತ್ರವಲ್ಲ ಹೆಚ್ಚಿನವರಲ್ಲಿ ನಿದ್ರೆಗೆ ಸಂಬಂಧಿಸಿದ ಸಮಸ್ಯೆಗಳು ಕಂಡುಬರುತ್ತಿದೆ. ಹೌದು, ನಿಮಗೂ ಕೂಡ ಈ ರೀತಿ ಸಮಸ್ಯೆ ಕಂಡುಬರುತ್ತಿದ್ದು, ರಾತ್ರಿ ಸರಿಯಾಗಿ ನಿದ್ರೆ (Sleep) ಬರದಿದ್ದರೆ ಅದಕ್ಕೆ ಮಾತ್ರೆ, ಔಷಧಿಗಳನ್ನು ಸೇವನೆ ಮಾಡಿ ಮತ್ತಷ್ಟು ಆರೋಗ್ಯ ಹಾಳು ಮಾಡಿಕೊಳ್ಳುವುದರ ಬದಲು ಮನೆಯಲ್ಲಿ ಈ ಸಣ್ಣ ಸಲಹೆಯನ್ನು ಪ್ರಯತ್ನಿಸುವ ಮೂಲಕ ನೆಮ್ಮದಿಯಿಂದ ನಿದ್ರಿಸಬಹುದು. ಹಾಗಾದರೆ ಏನದು ಸಲಹೆ ಎಂದು ಯೋಚಿಸುತ್ತಿದ್ದೀರಾ… ದೊಡ್ಡದೇನಲ್ಲ, ಮಲಗುವ ಮುನ್ನ ಕೇವಲ ಒಂದು ಲೋಟ ಹಾಲು (Milk) ಕುಡಿಯುವುದರಿಂದ ಯಾವುದೇ ರೀತಿಯ ಅಡ್ಡಿಯಿಲ್ಲದೆ ನೆಮ್ಮದಿಯಿಂದ ನಿದ್ರಿಸಬಹುದು. ಅಷ್ಟೇ ಅಲ್ಲ, ಮಲಗುವ ಮುನ್ನ ಹಾಲು ಕುಡಿಯುವುದರಿಂದ ಇನ್ನೂ ಅನೇಕ ಪ್ರಯೋಜನಗಳಿವೆ. ಏನದು? ಹಾಲಿಗೂ ನಿದ್ರೆಗೂ ಏನು ಸಂಬಂಧ? ಇದಕ್ಕೆಲ್ಲಾ ಉತ್ತರ ಈ ಸ್ಟೋರಿಯಲ್ಲಿದೆ.
RSS; ಸಿಎಂಗೆ ಮತ್ತೊಂದು ಪತ್ರ ಬರೆದ ಪ್ರಿಯಾಂಕ್ ಖರ್ಗೆ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಮತ್ತು ಇತರ ರಾಜಕೀಯ ಸಂಘಟನೆಗಳ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. 2021ರ ಕರ್ನಾಟಕ ನಾಗರಿಕ ಸೇವಾ (ನಡವಳಿಕೆ) ನಿಯಮಗಳನ್ನು ಉಲ್ಲೇಖಿಸಿ, ಸಚಿವರು ಈ ಮನವಿಯನ್ನು ಮಾಡಿದ್ದಾರೆ. ಈ ನಿಯಮಗಳ ಪ್ರಕಾರ, ಸರ್ಕಾರಿ ನೌಕರರು ಯಾವುದೇ ರಾಜಕೀಯ ಪಕ್ಷ ಅಥವಾ ಸಂಘಟನೆಯ ಸದಸ್ಯರಾಗಿರಬಾರದು, ರಾಜಕೀಯ ಚಟುವಟಿಕೆಗಳಲ್ಲಿ ಭಾಗವಹಿಸಬಾರದು ಮತ್ತು ಅಂತಹ ಸಂಸ್ಥೆಗಳಿಗೆ ಯಾವುದೇ ನೆರವು…
ಎಸಿಪಿ ಹುದ್ದೆಗೆ 1 ಕೋಟಿ ಲಂಚ, ಇನ್ಸ್ಪೆಕ್ಟರ್ಗೆ 75 ಲಕ್ಷ: ಮೈಸೂರಿನಲ್ಲಿ ಭ್ರಷ್ಟಾಚಾರದ ‘ವರ್ಗಾವಣೆ ದಂಧೆ’ ಬಯಲು ಮಾಡಿದ ಎಚ್. ವಿಶ್ವನಾಥ್
ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಎಸಿಪಿ ಮತ್ತು ಇನ್ಸ್ಪೆಕ್ಟರ್ ಹುದ್ದೆಗಳ ವರ್ಗಾವಣೆಗೆ ಭಾರಿ ಕಮಿಷನ್ ದಂಧೆ ನಡೆಯುತ್ತಿದೆ ಎಂದು ಮೈಸೂರಿನಲ್ಲಿ ಎಚ್. ವಿಶ್ವನಾಥ್ ಸ್ಫೋಟಕ ಆರೋಪ ಮಾಡಿದ್ದಾರೆ. ವರ್ಗಾವಣೆ ದಂಧೆ ಮತ್ತು ಭ್ರಷ್ಟಾಚಾರದ ಸಂಪೂರ್ಣ ವಿವರ ಇಲ್ಲಿದೆ.
ರಾಜ್ಯದಲ್ಲಿ ಮತ್ತೆ ವಿಸ್ತರಣೆಯಾಗುತ್ತಾ ಜಾತಿಗಣತಿ ಅವಧಿ?; ನಿಗದಿತ ಗುರಿ ತಲುಪಿಲ್ಲ ಸಮೀಕ್ಷೆ
ಬೆಂಗಳೂರು, ಅಕ್ಟೋಬರ್ 15: ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ & ಆರ್ಥಿಕ ಸಮೀಕ್ಷೆಗೆ (Caste Census) ನೀಡಲಾದ ಗಡುವು ಮುಗಿಯುತ್ತ ಬಂದರೂ ಗಣತಿ ಕಾರ್ಯ ಮಾತ್ರ ಸದ್ಯ ಪೂರ್ಣವಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ತಾಂತ್ರಿಕ ಸಮಸ್ಯೆ ಸೇರಿ ನಾನಾ ಕಾರಣಗಳಿಂದಾಗಿ ನಿರೀಕ್ಷಿತ ಗುರಿ ತಲುಪುವಲ್ಲಿ ಗಣತಿದಾರರು ವಿಫಲರಾಗುತ್ತಿದ್ದಾರೆ. ಅಕ್ಟೋಬರ್ 18ರ ವರೆಗೆ ಸಮೀಕ್ಷೆಯ ಅವಧಿಯನ್ನು ವಿಸ್ತರಿಸಲಾಗಿದ್ದರೂ ರಾಜಧಾನಿ ಬೆಂಗಳೂರಲ್ಲಿ ಈ ವರೆಗೆ ಶೇ.30ರಷ್ಟು ಮನೆಗಳ ಗಣತಿ ಮಾತ್ರ ನಡೆದಿದೆ. ಈ ಹಿನ್ನಲೆ ಜಿಬಿಎ ಮುಖ್ಯ ಆಯುಕ್ತರಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ…
